°
, May 20, 2024 in
Breaking News
PoliticsTop Stories
0

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಆಯ್ಕೆ

ನವದೆಹಲಿ, ನ 10: ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇದೀಗ ಕೊನೆಗೂ ನೇಮಕವಾಗಿದೆ.

  • ಶಿಕಾರಿಪುರ ಶಾಸಕ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲಾಗಿದೆ.ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಮುಗಿದರೂ ಈ ಸ್ಥಾನಕ್ಕೆ ಹೊಸ ನೇಮಕಾತಿ ಆಗಿರಲಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಹೊಸ ನೇಮಕಾತಿಯತ್ತ ಬಿಜೆಪಿ ವರಿಷ್ಠರು ಮನ ಮಾಡಿರಲಿಲ್ಲ.
  • ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಾಂದ್ಲಾಜೆ, ವಿ.ಸೋಮಣ್ಣ, ಸಿ.ಟಿ ರವಿ, ಆರ್.ಅಶೋಕ್ ಮುಂತಾದವರ ಹೆಸರು ಕೇಳಿಬಂದಿತ್ತು. ಆದರೆ ಕೊನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿದ್ದ ಬಿ.ವೈ ವಿಜಯೇಂದ್ರ ಅವರ ನೇಮಕವಾಗಿದೆ. ತಕ್ಷಣದಿಂದ ಬರುವಂತೆ ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *