ಪುತ್ತೂರು: ನೆಹರೂನಗರದ ವಿವೇಕಾನಂದ ಕಾಲೇಜು ಸಂಪರ್ಕ ರಸ್ತೆಯಲ್ಲಿರುವ ರೈಲ್ವೇ ಮೇಲ್ಸೇತುವೆ ಪುನರ್ನಿರ್ಮಾಣ ಕಾಮಗಾರಿಗೆ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಗುರುವಾರ ಶಿಲಾನ್ಯಾಸ ನೆರವೇರಿಸಿದರು.
ಐದು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಈ ರೈಲ್ವೇ ಮೇಲ್ಸೇತುವೆಯು ಬಹು ಬೇಡಿಕೆಯ ಮೇಲ್ಸೇತುವೆಯಾಗಿದೆ.
ರಾಜ್ಯಾಧ್ಯಕ್ಷ ಸ್ಥಾನವನ್ನು ವಿಜಯೇಂದ್ರರವರಿಗೆ ಹಸ್ತಾಂತರಗೈದ ಬಳಿಕ ದ.ಕ. ಸಂಸದರು ತನ್ನ ಲೋಕಸಭಾ ವ್ಯಾಪ್ತಿಯಲ್ಲಿ ಆಡಳಿತಕ್ಕೆ ಚುರುಕು ನೀಡಿದ್ದು ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ಭೇಟಿ ನೀಡಿ ಅಭಿವೃದ್ದಿ ಕಾರ್ಯಗಳ ಪರಾಮರ್ಶೆ ನಡೆಸುವ ನಿರ್ಧಾರ ಕೈಗೊಂಡಿದ್ದಾರೆ.